ಮೂಡುಬಿದಿರೆ: ಭಾರತವು ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾರ್ಗದರ್ಶಕವಾಗಿರುವ ಶ್ರೇಷ್ಠ ದೇಶ. ದೇಶದ ಹಿರಿಮೆ, ಸಂಸ್ಕೃತಿ ಹಾಗೂ ಪರಂಪರೆಯ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಬೇಕು ಎಂದು ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಮೂಡುಬಿದಿರೆಯ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮಾತನಾಡಿದರು.

2026ನೇ ಸಾಲಿನ ಎನ್‌ಸಿಇಆರ್‌ಟಿ ಕಾಮನ್ ಎಂಟ್ರನ್ಸ್ ಎಕ್ಸಾಮಿನೇಷನ್ l ಪರೀಕ್ಷೆಯಲ್ಲಿ ಅಖಿಲ ಭಾರತ 25ನೇ ರ‍್ಯಾಂಕ್ ಗಳಿಸಿದ ಎಕ್ಸಲೆಂಟ್ ಸಂಸ್ಥೆಯ ವಿದ್ಯಾರ್ಥಿನಿ ಮೌಲ್ಯ ಆರ್. ಜೈನ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು. ಎನ್.ಸಿ.ಸಿ ಕ್ಷೇತ್ರದಲ್ಲಿ ಸಾಧನೆಗೈದ ತಸ್ಲೀಂ ಅವರನ್ನು ಸನ್ಮಾನಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಮಾತನಾಡಿ, ‘ವಿಕಸಿತ ಭಾರತ’ದ ಕನಸು ನನಸಾಗಬೇಕಾದರೆ ವಿದ್ಯಾರ್ಥಿಗಳಲ್ಲಿ ಶಿಸ್ತು ಜೀವನ ಪದ್ಧತಿಯಾಗಬೇಕು. ವ್ಯಕ್ತಿಗಿಂತ ರಾಷ್ಟ್ರವೇ ಮುಖ್ಯ ಎಂಬ ಭಾವನೆ ಬೆಳೆದು ಜವಾಬ್ದಾರಿಯುತ ನಾಗರಿಕರಾಗಿ ಹೊರಹೊಮ್ಮಬೇಕು ಎಂದರು.

ಸಂಸ್ಥೆಯ ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲ ಪುಷ್ಪರಾಜ್ ಬಿ., ಉಪಪ್ರಾಂಶುಪಾಲ ಸುನಾದ್ ರಾಜ್ ಜೈನ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಉಪಸ್ಥಿತರಿದ್ದರು. ಜಯಶೀಲ್ ನಿರೂಪಿಸಿದರು. ಉಪನ್ಯಾಸಕಿ ವೈಷ್ಣವಿ ವಂದಿಸಿದರು.

ಎಂಬಿಡಿ_ಆಗಸ್ಟ್15_3_ಎಕ್ಸಲೆಂಟ್ ಎಜುಕೇಶನ್ ಫೌಂಡೇಶನ್ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಉಮಾನಾಥ ಕೋಟ್ಯಾನ್, ಯುವರಾಜ್ ಜೈನ್, ಮೌಲ್ಯ ಆರ್. ಜೈನ್ ಮತ್ತಿತರರಿದ್ದರು.