ಮೂಡುಬಿದಿರೆ: ಪ್ರೇರಣಾ ವಿದ್ಯಾ ಸಂಸ್ಥೆಯ ಆಡಳಿತದಲ್ಲಿ ಕಾಲ ಕಾಲಕ್ಕೆ ಬದಲಾವಣೆಗಳಾದರೂ,ಸರಕಾರದಿಂದ ಬಿಸಿಯೂಟ ಬಿಟ್ಟರೆ ಬೇರೆ ಯಾವ ಅನುದಾನವೂ ಸಿಗದೇ ಇದ್ದರೂ, ಕೇವಲ ವಿದ್ಯಾ ಪೋಷಕರ ಸತತ ಪ್ರೋತ್ಸಾಹ ಬೆಂಬಲದಿಂದ ಸವಾಲುಗಳನ್ನು ಮೆಟ್ಟಿ ನಿಂತು ಜಿಲ್ಲೆಯಲ್ಲಿಯೇ ಪ್ರೇರಣಾ ಶಾಲೆಯನ್ನು ಮಾದರಿ ಶಾಲೆಯಾಗಿಸುವಲ್ಲಿ ಯಶಸ್ವಿಯಾಗಿದ್ದೇವೆ. 50 ರಷ್ಟಿದ್ದ ಮಕ್ಕಳ ಸಂಖ್ಯೆ ಕೆಲವೇ ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗಿ ಶಿಶು ಮಂದಿರ ಸಹಿತ ಹಿರಿಯ ಪ್ರಾಥಮಿಕ ಶಾಲೆ ಸೇರಿ ಇದೀಗ 310 ಮಕ್ಕಳನ್ನು ಶಾಲೆ ಹೊಂದಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಭಾರತೀಯ ಶಿಕ್ಷಣ ಪದ್ಧತಿಗೆ ನಾವು ಸದಾ ಬದ್ಧರಾಗಿದ್ದೇವೆ ಎಂದು ಶಾಲಾ ಸಂಚಾಲಕ ಎಂ.ಶಾಂತಾರಾಮ ಕುಡ್ವ ಹೇಳಿದರು . ಸೇವಾಂಜಲಿ ಎಜುಕೇಶನಲ್ ಟ್ರಸ್ಟ್ ಮೂಡುಬಿದಿರೆ, ವಿದ್ಯಾ ಭಾರತಿ ಸಂಯೋಜಿತ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆಯ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದರು. ಮೂಡುಬಿದಿರೆಯ ಶ್ರೀ ವೆಂಕಟರಮಣ ಮತ್ತು ಶ್ರೀ ಹನುಮಂತ ದೇವಸ್ಥಾನದ ಮೊಕ್ತೇಸರ ಎಂ. ದಯಾನಂದ ಪೈಯವರು ಧ್ವಜಾರೋಹಣ ಮಾಡಿ, ಹಿಂದೆ ತಾನು ಈ ಶಾಲೆಯ ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿನ ಸೇವಾಚಟುವಟಿಕೆಗಳನ್ನು ಸ್ಮರಿಸಿ ಶುಭ ಹಾರೈಸಿದರು. ಟ್ರಸ್ಟ್ ಅಧ್ಯಕ್ಷ ರಾಜೇಶ್ ಎಂ.ಬಂಗೇರ, ಟ್ರಸ್ಟಿಗಳಾದ ಡಾ.ಕೇಶವ ಹೆಗ್ಡೆ, ಮಂಜುನಾಥ ಶೆಟ್ಟಿ, ಬಾಲಕೃಷ್ಣ ಬೋರ್ಕರ್, ಡಾ.ಆನಂದ ಕಾರ್ಲ, ಸೋಮನಾಥ್ ಕೋಟ್ಯಾನ್ ಉಪಸ್ಥಿತರಿದ್ದರು. ವರ್ತಕ ಡಿ.ಶ್ರೀನಿವಾಸ ಕಿಣಿ, ತೆರಿಗೆ ಸಲಹೆಗಾರ ಶೇಖರ್ ಮೂಡುಬಿದಿರೆ, ನಿವೃತ್ತ ಮುಖ್ಯ ಶಿಕ್ಷಕ ಜಯರಾಮ ರಾವ್, ಜಯರಾಜ್ ಜೈನ್ ಮುಖ್ಯ ಅತಿಥಿಗಳಾಗಿದ್ದರು. ಮುಖ್ಯ ಶಿಕ್ಷಕಿ ವತ್ಸಲಾ ರಾಜೇಶ್ ವಂದಿಸಿದರು. ಶಿಕ್ಷಕಿ ಹರ್ಷಿತಾ ನಿರೂಪಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.