ಮೂಡುಬಿದಿರೆ: ಪೊಳಲಿ ರಾಜರಾಜೇಶ್ವರಿ ಅಮ್ಮನವರ ಜಾತ್ರೆಯ ಸಂದರ್ಭದಲ್ಲಿ ರಾಮ್ ಫ್ರೆಂಡ್ಸ್ ಕಟೀಲು ತಂಡದ ವತಿಯಿಂದ ಹಮ್ಮಿಕೊಳ್ಳಲಾದ ಆರೋಗ್ಯ ಸೇವಾಪಥ ಅಭಿಯಾನದಲ್ಲಿ ಸಂಗ್ರಹವಾದ 1,50,000 ರೂಪಾಯಿ ಮೊತ್ತವನ್ನು ಕ್ಯಾನ್ಸರ್ ಪೀಡಿತ ಮಗುವಿನ ಚಿಕಿತ್ಸೆಗಾಗಿ ಹಸ್ತಾಂತರಿಸಲಾಯಿತು. ಬಂಟ್ವಾಳ ತಾಲೂಕಿನ ಕರ್ಪೆ ನಿವಾಸಿ ಸಂತೋಷ್ ಪೂಜಾರಿ ಅವರ 4 ವರ್ಷದ ಪುತ್ರ ಸಾರ್ಥಕ್ ಪೂಜಾರಿ ಬ್ಲಡ್ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಮಗುವಿನ ಚಿಕಿತ್ಸೆಗೆ ನೆರವಾಗುವ ನಿಟ್ಟಿನಲ್ಲಿ ತಂಡದ ಸದಸ್ಯರು ಹಾಗೂ ಕ್ಷೇತ್ರಕ್ಕೆ ಆಗಮಿಸಿದ ಭಕ್ತರು ಈ ಧನಸಹಾಯ ನೀಡಿದ್ದಾರೆ. ಪೊಳಲಿ ರಾಜರಾಜೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕ ರಾಮ್ ಭಟ್ ಪೊಳಲಿ ಅವರು ಮಗುವಿನ ಕುಟುಂಬಕ್ಕೆ ಚೆಕ್ ಹಸ್ತಾಂತರಿಸಿ ಹರಸಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ನಾಗೇಶ್ ಪೊಳಲಿ, ಯಶವಂತ್ ಪೊಳಲಿ, ತಂಡದ ಸ್ಥಾಪಕಾಧ್ಯಕ್ಷ ರಮಾನಂದ ಪೂಜಾರಿ ಕಟೀಲು, ಅಧ್ಯಕ್ಷ ಸುಮಂತ್ ಸುವರ್ಣ ಬಡಗಮಿಜಾರು ಉಪಸ್ಥಿತರಿದ್ದರು. ಸದಸ್ಯರಾದ ರಾಕೇಶ್ ಪೊಳಲಿ, ಗಣೇಶ್ ಕೋಟ್ಯಾನ್ ಪೆರ್ಮೆದೆ, ಗುರುಪ್ರಸಾದ್ ಮುಲ್ಕಿ, ಲಕ್ಷ್ಮಣ ಪೂಜಾರಿ ಪೊಳಲಿ, ನಾಗೇಶ್ ಬುಡಿಗಾಡ್, ರಾಕೇಶ್ ಬಜ್ಪೆ, ಶಶಿ ಬುಡಿಗಾಡ್, ಅಜಿತ್ ಆಚಾರ್ಯ, ಧನುಸ್ಸು ಉಲ್ಲಂಜೆ, ಸಾತ್ವಿಕ್ ಉಲ್ಲಂಜೆ, ಪ್ರಜ್ವಲ್ ಮೂರುಕಾವೇರಿ ಹಾಗೂ ಗೋಪಿನಾಥ್ ಭಟ್ರಕೆರೆ ಪಾಲ್ಗೊಂಡಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.