ಮೂಡುಬಿದಿರೆ:ತಾಲೂಕಿನ ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪರಾರಿ ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದ ಸಿಡಿಲು ಬಡಿತಕ್ಕೆ ಮೂರು ದನಗಳು ಮೃತಪಟ್ಟಿವೆ. ಆನಂದ ಮೇರ ಎಂಬವರಿಗೆ ಸೇರಿದ ಹಸುಗಳು ಕೊಟ್ಟಿಗೆಯಲ್ಲಿರುವಾಗಲೇ ಈ ದುರ್ಘಟನೆ ಸಂಭವಿಸಿದೆ. ಸೋಮವಾರ ಸಂಜೆ ವೇಳೆ ಮೂಡುಬಿದಿರೆ ತಾಲೂಕಿನಾದ್ಯಂತ ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಭಾರಿ ಮಳೆಯೂ ಸುರಿದಿದೆ. ಆನಂದ ಮೇರ ಈ ಮೂರು ದನಗಳಿಂದ ಹಾಲು ಸಂಗ್ರಹಿಸಿ ಡೈರಿಗೆ ನೀಡುತ್ತಿದ್ದರು. ಸಿಡಿಲು ಬಡಿದ ತೀವ್ರತೆಗೆ ಕೊಟ್ಟಿಗೆಯಲ್ಲಿದ್ದ ದನಗಳು ಸ್ಥಳದಲ್ಲೇ ಸಾವನ್ನಪ್ಪಿವೆ.
ಜಾಹೀರಾತು
ಇನ್ನಷ್ಟು ಓದಿ
ಮೂಡುಬಿದಿರೆಯಲ್ಲಿ ಚಲಿಸುತ್ತಿದ್ದ ಕಾರಿಗೆ ಬೆಂಕಿ: ಕಾರಿನಲ್ಲಿದ್ದವರು ಅಪಾಯದಿಂದ ಪಾರು
ಮೂಡುಬಿದಿರೆ: ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ
Y · 1 ನಿಮಿಷ
ಮೂಡುಬಿದಿರೆ ವಿಶಾಲನಗರದಲ್ಲಿ ಭೀಕರ ಸ್ಥಿತಿಯಲ್ಲಿ ದನ ಸಾವು: ಪುರಸಭೆ, ಪೊಲೀಸರಿಂದ ದಫನ
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರದಲ್ಲಿ ದನವೊಂದು ಭೀಕರ ಸ್ಥಿತಿಯಲ್ಲಿ ಸಾವಿಗೀಡಾಗಿರುವುದು ಬುಧವಾರ ಬೆಳಕಿಗೆ ಬಂದಿದೆ.
Y · 1 ನಿಮಿಷ
ಅಳಿಯೂರಿನಲ್ಲಿ ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ
ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಯೂರಿನಲ್ಲಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
Y · 1 ನಿಮಿಷ · 1