ಮೂಡುಬಿದಿರೆ: ವಾಲ್ಪಾಡಿ ಮುಹಿಯುದ್ದೀನ್ ಜುಮ್ಮಾ ಮಸೀದಿ ವತಿಯಿಂದ ನಿರ್ಮಿಸಲಾದ ನೂತನ ವಸತಿಗೃಹಗಳ ಕಟ್ಟಡದ ಉದ್ಘಾಟನಾ ಸಮಾರಂಭ ಭಾನುವಾರ ಸಂಜೆ ನಡೆಯಿತು. ದುಗ್ಗಲಡ್ಕ ಅಸ್ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ಕಟ್ಟಡ ಉದ್ಘಾಟಿಸಿದರು. ಮಸೀದಿ ಕಮಿಟಿ ಅಧ್ಯಕ್ಷ ಎಂ.ಎಂ.ಶರೀಫ್, ಕಾರ್ಯದರ್ಶಿ ಝಕರಿಯಾ ಯೂಸುಫ್, ಗೌರವಾಧ್ಯಕ್ಷ ಮುಹಮ್ಮದ್ ದೋಣಿಬಾಗಿಲು, ಎಸ್ ಕೆ ಎಸ್ ಎಸ್ ಎಫ್ ವಾಲ್ಪಾಡಿ ಶಾಖೆ ಅಧ್ಯಕ್ಷ ಉಬೈದುಲ್ಲಾ, ಕಾರ್ಯದರ್ಶಿ ಜಮಾಲುದ್ದೀನ್ ಉಪಸ್ಥಿತರಿದ್ದರು. ವಾಲ್ಪಾಡಿ ಮಸೀದಿ ಖತೀಬ ಅಬ್ದುಲ್ ಹಮೀದ್ ದಾರಿಮಿ, ಸದರ್ ಉಸ್ಮಾನ್ ಬಾಖವಿ, ಮುಅಝ್ಝಿನ್ ಹನೀಫ್ ಮುಸ್ಲಿಯಾರ್, ಮಕ್ಕಿ ಮಸೀದಿ ಖತೀಬ ಹನೀಫ್ ದಾರಿಮಿ ಹಾಗೂ ಮುಅಝ್ಝಿನ್ ಇಸ್ಮಾಯಿಲ್ ಮುಸ್ಲಿಯಾರ್ ಪಾಲ್ಗೊಂಡಿದ್ದರು. ಮಗರಿಬ್ ನಮಾಝ್ ನಂತರ ದುಗ್ಗಲಡ್ಕ ತಂಙಳ್ ನೇತೃತ್ವದಲ್ಲಿ ನಾಲ್ಕನೇ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮ ನಡೆಯಿತು. ಮಸೀದಿ ಮಾಜಿ ಖತೀಬ ಅಬ್ಬಾಸ್ ಫೈಝಿ ದಿಡುಪೆ, ದಾರುನ್ನೂರ್ ಹುಸೈನ್ ರಹ್ಮಾನಿ, ಕಾಶಿಪಟ್ಣ ಮಸೀದಿ ಖತೀಬ ಎಸ್.ಅಬೂಬಕ್ಕರ್ ನಿಝಾಮಿ ಮತ್ತು ಮುಸ್ತಫಾ ಹನೀಫಿ ಭಾಗವಹಿಸಿದ್ದರು. ಇದೇ ವೇಳೆ ಹಜ್ ಯಾತ್ರೆಗೆ ತೆರಳಲಿರುವ ಹಸನಬ್ಬ ( ಬಾವುಞ್ಞಾಕ ) ಹಾಗೂ ಹಾಫಿಳ್ ಇಲ್ಯಾಸ್ ಮಕ್ಕಿ ಅವರನ್ನು ದುಗ್ಗಲಡ್ಕ ತಂಙಳ್ ಸನ್ಮಾನಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಂಘಟಕರು ಎಲ್ಲರಿಗೂ ವಂದಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.