ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಮೂಡುಬಿದಿರೆ ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ, ಮೂಡುಬಿದಿರೆ ತಾಲೂಕು ಘಟಕದ ಪದಾಧಿಕಾರಿಗಳ ಸಭೆಯು ಬುಧವಾರ ಸಮಾಜ ಮಂದಿರದಲ್ಲಿ ನೆರವೇರಿತು. ಕಾರ್ಯಕ್ರಮವನ್ನು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಉದ್ಘಾಟಿಸಿದರು. ಸುಭಾಶ್ಚಂದ್ರ ಚೌಟ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಈ ಸಾಲಿನ ಕ್ರಿಯಾಯೋಜನೆ ಕುರಿತು ಚರ್ಚೆ ನಡೆಸಲಾಯಿತು. ಇದೇ ವೇಳೆ ಪದಾಧಿಕಾರಿಗಳ ಬದಲಾವಣೆ ಮಾಡಲಾಗಿದ್ದು, ನೂತನ ಅಧ್ಯಕ್ಷರಾಗಿ ವಾಸುದೇವ ನಾಯಕ್ ಅವರನ್ನು ಆಯ್ಕೆ ಮಾಡಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಡಿ. ದಿನೇಶ್ ಅವರು ಮಾರ್ಗದರ್ಶನ ನೀಡಿದರು. ವಲಯದ ಜನಜಾಗೃತಿ ವೇದಿಕೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು. ತಾಲೂಕು ಯೋಜನಾಧಿಕಾರಿ ಧನಂಜಯ ಬಿ. ಅವರು ಸ್ವಾಗತಿಸಿ, ಗತ ಸಭೆಯ ವರದಿಯನ್ನು ಮಂಡಿಸಿದರು. ಪ್ರಾದೇಶಿಕ ವ್ಯಾಪ್ತಿಯ ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಅವರು ಭಾಗವಹಿಸಿ, ಯಶಸ್ವಿ ಕಾರ್ಯಕ್ರಮ ಸಂಯೋಜನೆ ಕುರಿತು ಮಾಹಿತಿ ನೀಡಿದರು. ತಾಲೂಕಿನ ಎಲ್ಲಾ ಜನಜಾಗೃತಿ ಸದಸ್ಯರು, ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು ಹಾಗೂ ವೇದಿಕೆಯ ಮೇಲ್ವಿಚಾರಕರು ಸಭೆಯಲ್ಲಿ ಭಾಗವಹಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.