ಮೂಡುಬಿದಿರೆ: ಕೆ.ಸಿ ರೋಡ್ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಉಚಿತ ವೈದ್ಯಕೀಯ, ಕಣ್ಣಿನ ಮತ್ತು ದಂತ ಚಿಕಿತ್ಸಾ ಶಿಬಿರವನ್ನು ಆಯೋಜಿಸಿದೆ. ಏ. 26ರ ಭಾನುವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.30ರ ವರೆಗೆ ಕೆ.ಸಿ ರೋಡ್ನ ಸುಜಾತ ಜ್ಯುವೆಲ್ಲರಿ ಸಮೀಪವಿರುವ ಉಚ್ಚಿಲಸ್ ಕಾಂಪ್ಲೆಕ್ಸ್ನಲ್ಲಿ ನಡೆಯಲಿದೆ. ಅತ್ತಾವರದ ಕೆ.ಎಂ.ಸಿ ಆಸ್ಪತ್ರೆ ಮತ್ತು ಮಂಗಳೂರಿನ ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್ ಸಂಸ್ಥೆಯ ನುರಿತ ವೈದ್ಯರು ಶಿಬಿರದಲ್ಲಿ ಚಿಕಿತ್ಸೆ ನೀಡಲಿದ್ದಾರೆ. ಶಿಬಿರದಲ್ಲಿ ದಂತ ತಪಾಸಣೆ, ಹಲ್ಲುಗಳ ಶುಚೀಕರಣ, ಹುಳುಕು ಹಲ್ಲು ಭರ್ತಿ ಮಾಡುವುದು ಮತ್ತು ಬಾಧಿತ ಹಲ್ಲುಗಳನ್ನು ತೆಗೆಯುವ ಸೇವೆ ಲಭ್ಯವಿರಲಿದೆ. ಇದರೊಂದಿಗೆ ಕಣ್ಣಿನ ತಪಾಸಣೆ, ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯ ಸಮಾಲೋಚನೆ, ಬಿ.ಪಿ, ಮಧುಮೇಹ ಹಾಗೂ ಕಿವಿ, ಮೂಗು, ಗಂಟಲು ತಪಾಸಣೆ ನಡೆಯಲಿದ್ದು, ಅಗತ್ಯವಿರುವವರಿಗೆ ಉಚಿತ ಕನ್ನಡಕಗಳನ್ನು ವಿತರಿಸಲಾಗುವುದು. ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆ ಇರುವವರಿಗೆ ಹಸಿರು ಕಾರ್ಡ್ ಸೌಲಭ್ಯವನ್ನೂ ನೀಡಲಾಗುತ್ತದೆ. ಎನ್.ಜಿ ವರ್ಲ್ಡ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ಕೆ.ಸಿ ರೋಡ್ ಕೃಷ್ಣ ನಗರದ ಶ್ರೀ ಕೃಷ್ಣ ಭಜನಾ ಮಂದಿರ ಮತ್ತು ಪನೀರ್ ಬಾಳಿಕೆಯ ಶ್ರೀ ಲಕ್ಷ್ಮಿ ಶಾಮಿಯಾನ ಸಂಸ್ಥೆಗಳ ಸಹಕಾರದೊಂದಿಗೆ ಈ ಶಿಬಿರ ಆಯೋಜನೆಯಾಗಿದೆ. ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಲಾಭ ಪಡೆಯಬೇಕೆಂದು ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.