ಮೂಡುಬಿದಿರೆ: ಸ್ವಚ್ಛ ಭಾರತ ಮಿಷನ್ (ನಗರ) 2.0 ಯೋಜನೆಯಡಿ ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯ ನಡೆಸುವ 'ಸ್ವಚ್ಛ ಸರ್ವೇಕ್ಷಣೆ 2025-26' ರ ಸಮೀಕ್ಷೆಯಲ್ಲಿ ನಾಗರಿಕರು ತಮ್ಮ ಅಭಿಪ್ರಾಯ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಜನಸಾಮಾನ್ಯರು ಸ್ಮಾರ್ಟ್ ಮೊಬೈಲ್ ಮೂಲಕ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಸಚಿವಾಲಯದ ಅಧಿಕೃತ ವೆಬ್ ಲಿಂಕ್ ಬಳಸಿ ನೈಜ ಅಭಿಪ್ರಾಯ ಹಂಚಿಕೊಳ್ಳುವಂತೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ. ಸರಳ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ನಗರವನ್ನು ಸ್ವಚ್ಛತೆಯ ಮಾನದಂಡದಲ್ಲಿ ಮುಂಚೂಣಿಗೆ ತರಲು ಸಹಕರಿಸಬೇಕು. ಸಾರ್ವಜನಿಕರು ಮನೆಯಲ್ಲಿಯೇ ಕಸವನ್ನು ಹಸಿ, ಒಣ ಹಾಗೂ ಅಪಾಯಕಾರಿ ತ್ಯಾಜ್ಯವಾಗಿ ವಿಂಗಡಿಸುವುದರ ಜೊತೆಗೆ ಮಾರುಕಟ್ಟೆ, ನಿಲ್ದಾಣ ಮತ್ತು ಧಾರ್ಮಿಕ ಕ್ಷೇತ್ರಗಳ ನೈರ್ಮಲ್ಯ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ನಗರಕ್ಕಾಗಿ ಬಟ್ಟೆ ಚೀಲಗಳನ್ನು ಬಳಸುವ ಅಭ್ಯಾಸ ರೂಢಿಸಿಕೊಳ್ಳುವಂತೆ ಅವರು ತಿಳಿಸಿದರು.
ಮೂಡುಬಿದಿರೆ: ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ
ಮೂಡುಬಿದಿರೆ: ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ