ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಅಸಾಧಾರಣ ಸಾಧನೆಗೈದು ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ/ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈ ಹಿಂದೆ ಅನನ್ಯ ಕೆ, 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದು, ದ್ವಿತೀಯ ಪಿಯು ಫಲಿತಾಂಶದ ಇತಿಹಾಸದಲ್ಲಿ ಮೊದಲ ಬಾರಿಗೆ ಈ ಸಾಧನೆ ಮೆರೆದಿದ್ದಳು.ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಮಂಜುನಾಥ್ ಎಸ್ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ, ಈ ವರ್ಷದ ಫಲಿತಾಂಶದಲ್ಲಿ 95 ವಿದ್ಯಾರ್ಥಿಗಳು ರಾಜ್ಯದ ಟಾಪ್ 10 ರ್ಯಾಂಕ್ಗಳಲ್ಲಿ ಸ್ಥಾನ ಪಡೆದಿದ್ದಾರೆ. 687 ವಿದ್ಯಾರ್ಥಿಗಳು ಶೇ.95ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದರೆ, 1557 ವಿದ್ಯಾರ್ಥಿಗಳು ಶೇ.90 ಕ್ಕಿಂತ ಅಧಿಕ, 1892 ವಿದ್ಯಾರ್ಥಿಗಳು ಶೇ.85ಕ್ಕಿಂತ ಹೆಚ್ಚು (ಡಿಸ್ಟಿಂಕ್ಷನ್) ಅಂಕಗಳನ್ನು ಗಳಿಸಿದ್ದಾರೆ. 285 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಪಲ್ಲವಿ ಕೆ. ಸಿ 597, ಅಂಕಿತಾ ಬಸಪ್ಪ ಕೊನ್ನೂರ 596, ದಿಶಾ ಎಚ್ ಶೆಟ್ಟಿ 596, ಜ್ಞಾನಶ್ರೀ ಡಿ ಅರಳ 596 ,ಆದರ್ಶ್ ಬಾಲಚಂದ್ರ ಹೆಗಡೆ 596, ಲಿಜ್ವಿತಾ ವರ್ಜೀನಿಯಾ ಡಿ ಮೆಲ್ಲೋ 596, ನೇಹಾ ಪಿ ಕಕರಡ್ಡಿ 596, ಐಶ್ವರ್ಯ 595, ಮಾನವಿ ಡಿ ಎಸ್ 595, ನಿರಾಳಿ ಹೆಗ್ಗರ್ 595, ಜಶ್ ಕಾವೇರಿಯಪ್ಪ ಎ. ಎಂ 595, ವೈಷ್ಣವಿ ರಾವ್ 595, ಅಕ್ಷಯಕುಮಾರ್ ಸೋಮಶೇಖರ ಗುಗ್ಗಾರಿ 595 ಅಂಕವನ್ನು ಪಡೆದಿದ್ದಾರೆ. ಗಣಿತ ವಿಷಯದಲ್ಲಿ 199, ಸಂಸ್ಕೃತ -122, ಬಿಸಿನೆಸ್ ಸ್ಟಡೀಸ್-86, ಕಂಪ್ಯೂಟರ್ ಸೈನ್ಸ್ -86, ಭೌತಶಾಸ್ತ್ರ-85, ಕನ್ನಡ-82, ಬೇಸಿಕ್ ಮ್ಯಾತ್ಸ್- 54, ಅಕೌಂಟೆನ್ಸಿ-53, ಜೀವಶಾಸ್ತ್ರ-49, ಸಂಖ್ಯಾಶಾಸ್ತ್ರ-45, ಅರ್ಥಶಾಸ್ತ್ರ-36, ರಸಾಯನಶಾಸ್ತ್ರ-21, ಹಿಂದಿ-13, ಎಲೆಕ್ರಟ್ರಾನಿಕ್ಸ್ ಆರಟಅರಕ್ಸ್-6, ಇಂಗ್ಲೀಷ್-3, ಸಮಾಜಶಾಸ್ತ್ರ-2, ರಾಜ್ಯಶಾಸ್ತ್ರ-1, ಅರೇಬಿಕ್-1 ವಿದ್ಯಾರ್ಥಿಗಳು 100ಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ. 6 ವಿಷಯಗಳಲ್ಲಿ 100ಕ್ಕೆ ನೂರು ಅಂಕಗಳನ್ನು ಒರ್ವ ವಿದ್ಯಾರ್ಥಿ, 5 ವಿಷಯಗಳಲ್ಲಿ 4, 4 ವಿಷಯಗಳಲ್ಲಿ 20, 3 ವಿಷಯಗಳಲ್ಲಿ 66, 2 ವಿಷಯದಲ್ಲಿ 147, ಒಂದು ವಿಷಯದಲ್ಲಿ 481 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಪ್ರಾಂಶುಪಾಲ ಪ್ರೊ. ಎಂ. ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿಎನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ., ಕಲಾ ನಿಖಾಯದ ವೇಣುಗೋಪಾಲ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.