ಮೂಡುಬಿದಿರೆ: ಪಡುಮಾರ್ನಾಡು ಗ್ರಾಮ ಪಂಚಾಯತ್ ಹಾಗೂ ಪಡುಮಾರ್ನಾಡು ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಜಂಟಿ ಆಶ್ರಯದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಮಂಗಳವಾರ ಅಚ್ಚರಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರಂಭಗೊಂಡಿತು. ಐದು ದಿನಗಳ ಕಾಲ ನಡೆಯುವ ಈ ಶಿಬಿರಕ್ಕೆ ಪಡುಮಾರ್ನಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯೀಶ ಚೌಟ ಚಾಲನೆ ನೀಡಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಚ್ಚರಕಟ್ಟೆ ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲಾ ಶೆಟ್ಟಿ ಉಪಸ್ಥಿತರಿದ್ದರು. ಗ್ರಾಮೀಣ ಮಕ್ಕಳ ಸಂಜೀವಿನಿ ಒಕ್ಕೂಟದ ನಾಗಶ್ರೀ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಪ್ರೆಸ್ ಕ್ಲಬ್ ಕಾರ್ಯದರ್ಶಿ ಪ್ರೇಮಶ್ರೀ ಕಲ್ಲಬೆಟ್ಟು ಅತಿಥಿಯಾಗಿ ಪಾಲ್ಗೊಂಡಿದ್ದರು. ವಿದ್ಯಾರ್ಥಿನಿ ಹರ್ಷಾ ಸ್ವಾಗತಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ವನಿತಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಂಚಾಯತ್ ಸಿಬ್ಬಂದಿ ಕಿಶೋರ್ ಮತ್ತು ರಾಜು ಕಾರ್ಯಕ್ರಮ ನಿರೂಪಿಸಿದರು. ಕೃತಿಕಾ ವಂದಿಸಿದರು. ಈ ಬೇಸಿಗೆ ಶಿಬಿರದಲ್ಲಿ ಒಟ್ಟು 34 ಮಕ್ಕಳು ಭಾಗವಹಿಸಿದ್ದು, ಯೋಗ, ಪಾಸಿಂಗ್ ದ ಬಾಲ್, ಶಟಲ್ ಬ್ಯಾಟ್, ನೃತ್ಯ, ಸಂಗೀತ, ಐಕ್ಯೂ ಟೆಸ್ಟ್, ಬ್ರೈನ್ ಟೆಸ್ಟ್ ಹಾಗೂ ಹುಲಿ-ದನ ಆಟಗಳಲ್ಲಿ ಮಕ್ಕಳು ಪಾಲ್ಗೊಂಡರು.