ಮೂಡುಬಿದಿರೆ: ಇಲ್ಲಿನ ಮುಖ್ಯರಸ್ತೆಯ ಅಂಚೆ ಕಚೇರಿ ಬಳಿ ನಿರ್ಮಿಸಿರುವ ನೂತನ ರಾಮಯ್ಯ ಕಾಂಪ್ಲೆಕ್ಸ್ನಲ್ಲಿ 'ನ್ಯೂ ಕಾಂತೇಶ್ವರ ಜ್ಯುವೆಲ್ಲರ್ಸ್ ಏ.12 ಶುಭಾರಂಭಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಶಾಸಕ ಉಮಾನಾಥ ಕೋಟ್ಯಾನ್ ನೂತನ ಜ್ಯುವೆಲ್ಲರ್ಸ್ ಅನ್ನು ಉದ್ಘಾಟಿಸಲಿದ್ದಾರೆ. ಜೈನಮಠದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಕಾಂತೇಶ್ವರ ದೇವಸ್ಥಾನದ ಧರ್ಮದರ್ಶಿ ಜೀವಂಧರ ಬಲ್ಲಾಳ್ ದೀಪ ಪ್ರಜ್ವಲನೆಗೊಳಿಸಲಿದ್ದು ಮುಖ್ಯ ಅತಿಥಿಗಳಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲು, ಮಾಜಿ ಸಚಿವ ಅಭಯಚಂಧ್ರ ಜೈನ್, ಕೆಪಿಸಿಸಿ ಪ್ರಧಾನ ಕರ್ಯದರ್ಶಿ ಮಿಥುನ್ ರೈ, ಚೌಟರ ಅರಮನೆಯ ಕುಲದೀಪ ಎಂ, ಅಲಂಗಾರು ಮಹಾಲಂಗೇಶ್ವರ ದೇವಸ್ಥಾನದ ಅರ್ಚಕ ಈಶ್ವರ ಭಟ್, ಪಡ್ಯಾರಬೆಟ್ಟು ಧರ್ಮದರ್ಶಿ ಜೀವಂಧರ ಕುಮಾರ್ ಎಂಸಿಎಸ್ ಬ್ಯಾಂಕ್ ಅಧ್ಯಕ್ಷ ಬಾಹುಬಲಿ ಪ್ರಸಾದ್, ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ ಎಂ., ಉದ್ಯಮಿಗಳಾದ ಶ್ರೀಪತಿ ಭಟ್, ತಿಮ್ಮಯ್ಯಶೆಟ್ಟಿ, ನಾರಾಯಣ ಪಿಎಂ, ಮೇಘನಾಥ ಶೆಟ್ಟಿ, ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ, ಗಣ್ಯರಾದ ಸಂಪತ್ ಸಾಮ್ರಾಜ್ಯ, ಸಂಜೀವ ಶೆಟ್ಟಿ, ಶಂಕರ್, ಸಂತೋಷ ಶೆಟ್ಟಿ, ಸುರೇಶ್ ಶೆಟ್ಟಿ, ಹಸನಬ್ಬ ಪೆರಾಡಿ ಭಾಗವಹಿಸಲಿದ್ದಾರೆ. 64 ವರ್ಷಗಳ ಇತಿಹಾಸವಿರುವ ಮೂರು ತಲೆಮಾರುಗಳ ಅನುಭವ ಹೊಂದಿರುವ ಈ ಸಂಸ್ಥೆಯು ಗ್ರಾಹಕರ ವಿಶ್ವಾಸಾರ್ಹತೆಗೆ ಪಾತ್ರವಾಗಿದೆ. ಹೊಸ ಮಳಿಗೆಯಲ್ಲಿದಿನ ಬಳಕೆಯ ಚಿನ್ನಾಭರಣಗಳು ಹೋಲ್ಸೇಲ್ ದರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಪ್ರಕಟನೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.