ಮೂಡುಬಿದಿರೆ: ಶಿರ್ತಾಡಿ ಕಾರ್ಮೆಲ್ ಮಾತೆಯ ದೇವಾಲಯದ ಧರ್ಮಗುರುಗಳಾಗಿ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಅಧಿಕಾರ ಸ್ವೀಕರಿಸಿದರು. ಶಿರ್ತಾಡಿ ಚರ್ಚ್‌ನಲ್ಲಿ ಆರು ವರ್ಷ ಸೇವೆ ಸಲ್ಲಿಸಿರುವ ಹೆರಾಲ್ಡ್ ಮಸ್ಕರೇನ್ಹಸ್ ಬೇಳಾ ಚರ್ಚ್ ಧರ್ಮಗುರುಗಳಾಗಿ ವರ್ಗಾವಣೆಗೊಂಡಿದ್ದಾರೆ. ಮೂಲತಃ ಮೊಗರ್ನಾಡಿನವರಾದ ಸಿಲ್ವೆಸ್ಟರ್ ವಿನ್ಸೆಂಟ್ ಲೋಬೋ ಬೆಂದೂರು, ಬೋಂದೆಲ್ ಚರ್ಚ್‌ಗಳಲ್ಲಿ ಸೇವೆ ಸಲ್ಲಿಸಿದ್ದು, ಫಾದರ್ ಮುಲ್ಲರ್ಸ್ ಹೋಮಿಯೋಪಥಿಕ್ ಕಾಲೇಜಿನ ಸಹಾಯಕ ಆಡಳಿತಾಧಿಕಾರಿಯಾಗಿ ಹಾಗೂ ತುಂಬೆ ಫಾದರ್ ಮುಲ್ಲರ್ಸ್ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.