ಮೂಡುಬಿದಿರೆ: ಇಲ್ಲಿನ ಅಚ್ಚರಕಟ್ಟೆ ಪಡುಮಾರ್ನಾಡು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಂಪನ್ನಗೊಂಡಿತು. ಶಿಬಿರದಲ್ಲಿ ಒಟ್ಟು 38 ಮಕ್ಕಳು ಪಾಲ್ಗೊಂಡಿದ್ದರು. ಪಂಚಾಯತ್ ಆಡಳಿತಾಧಿಕಾರಿ ಡಾ.ಮಲ್ಲಿಕಾರ್ಜುನ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಾಯಿಶ್ ಚೌಟ, ಅಚ್ಚರಕಟ್ಟೆ ಶಾಲೆಯ ಸ್ಥಾಪಕಾಧ್ಯಕ್ಷ, ಪಡುಮಾರ್ನಾಡು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷ ಎಂ ದಯಾನಂದ ಪೈ, ಶಾಲಾ ಮುಖ್ಯ ಶಿಕ್ಷಕಿ ಶಕುಂತಲಾ ಶೆಟ್ಟಿ, ಶಿಕ್ಷಕಿ ನಾಗಶ್ರೀ, ರಾಜು ಮತ್ತು ಗ್ರಂಥಪಾಲಕಿ ವನಿತಾ ಉಪಸ್ಥಿತರಿದ್ದರು. ಮಕ್ಕಳೇ ನಿರ್ವಹಿಸಿದ ಈ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಮಕ್ಕಳು ಬೇಸಿಗೆ ಶಿಬಿರದ ಅನಿಸಿಕೆ ಹಂಚಿಕೊಂಡರು. ಮಾದಕ ದ್ರವ್ಯ ನಿರ್ಮೂಲನೆ ಬಗ್ಗೆ 'ಹಕ್ಕಿಯ ಹಾರಾಟ' ಸ್ಕಿಟ್, ಶಿಕ್ಷಣದ ಮಹತ್ವದ ಕುರಿತು ಸ್ಕಿಟ್ ಹಾಗೂ ಕೈಗಳ ಸ್ವಚ್ಛತೆಯನ್ನು ನೃತ್ಯರೂಪಕದ ಮೂಲಕ ಪ್ರದರ್ಶಿಸಿದರು. ನಂತರ ತುಳಸಿ ನೃತ್ಯ, ಹಾಡು, ಅಭಿನಯ ಗೀತೆ ಹಾಗೂ ಫ್ಯಾಷನ್ ಶೋ ನಡೆಯಿತು. ಫ್ಯಾಷನ್ ಶೋನಲ್ಲಿ ಮಕ್ಕಳು ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಮಿಂಚಿದರು. ದಾನಿಗಳಿಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಪ್ರಾರಂಭದಲ್ಲಿ ಪ್ರತೀಕ್ಷಾ ಸ್ವಾಗತಿಸಿದರು. ತನ್ವಿ ಕಾರ್ಯಕ್ರಮ ನಿರೂಪಿಸಿದರು. ಮೋಕ್ಷ ವಂದಿಸಿದರು.
ಗ್ರಾಮೀಣ ಮಕ್ಕಳಿಗೆ ಶಿಕ್ಷಣದ ಜೊತೆ ಮನರಂಜನೆ: ಪಡುಮಾರ್ನಾಡು ಬೇಸಿಗೆ ಶಿಬಿರ ಸಂಪನ್ನ
ಮೂಡುಬಿದಿರೆ: ಇಲ್ಲಿನ ಅಚ್ಚರಕಟ್ಟೆ ಪಡುಮಾರ್ನಾಡು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಸಂಪನ್ನಗೊಂಡಿತು. ಶಿಬಿರದಲ್ಲಿ ಒಟ್ಟು 38 ಮಕ್ಕಳು ಪಾಲ್ಗೊಂಡಿದ್ದರು.