ಮೂಡುಬಿದಿರೆ: ಮಾರೂರು ಗುಡ್ಡೆಲಂಗಡಿ ಶ್ರೀ ಸತ್ಯನಾರಾಯಣ ಪೂಜಾ ಸೇವಾ ಸಮಿತಿ ಮತ್ತು ಮಹಿಳಾ ಘಟಕದ ವತಿಯಿಂದ ಸಹಾಯ ಹಸ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮಾರೂರು ಚನಿಲೋಟ್ಟು ನಿವಾಸಿ ನಾರಾಯಣ ಪೂಜಾರಿ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಆರ್ಥಿಕ ನೆರವು ಕೋರಿ ಮನವಿ ಮಾಡಿದ್ದರು. ಈ ಮನವಿಗೆ ತಕ್ಷಣ ಸ್ಪಂದಿಸಿದ ಸಮಿತಿಯ ಅಧ್ಯಕ್ಷ ಶಂಕರ್ ಕೋಟ್ಯಾನ್ ಪದಾಧಿಕಾರಿಗಳೊಂದಿಗೆ ನಾರಾಯಣ ಪೂಜಾರಿ ಅವರ ಮನೆಗೆ ತೆರಳಿ ಆರ್ಥಿಕ ಧನಸಹಾಯ ಹಸ್ತಾಂತರಿಸಿದರು.