ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮೇ 29ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ರಂಗಾಯಣ ಶಿವಮೊಗ್ಗ ತಂಡದಿಂದ “ಸ್ವಾತಂತ್ರ್ಯದ ಓಟ” ನಾಟಕ ಪ್ರದರ್ಶನ ನಡೆಯಲಿದೆ. ನೀನಾಸಂ ನಟರಾಜ ಹೊನ್ನವಳ್ಳಿ ನಿರ್ದೇಶಿಸಿರುವ ಈ ನಾಟಕವು ಬೊಳುವಾರು ಮಹಮ್ಮದ್ ಕುಂಞ ಅವರ ಕಾದಂಬರಿಯನ್ನು ಆಧರಿಸಿದ್ದು, ದೇಶ ವಿಭಜನೆಯ ಸಂದರ್ಭದ ನಿರಾಶ್ರಿತ ಜೀವನ, ಮಾನವೀಯ ಸಂಬಂಧಗಳು ಹಾಗೂ ಸಾಮರಸ್ಯದ ಸಂದೇಶವನ್ನು ಬಿಂಬಿಸುತ್ತದೆ. ಕವ್ವಾಲಿ, ಗಝಲ್ ಸೇರಿದಂತೆ ಭಾರತೀಯ ಸಂಗೀತ ಅಂಶಗಳನ್ನು ಒಳಗೊಂಡ ಈ ಮೂರು ಗಂಟೆಗಳ ನಾಟಕ ಪ್ರೇಕ್ಷಕರಿಗೆ ವಿಶೇಷ ಅನುಭವ ನೀಡಲಿದೆ. ಪ್ರವೇಶ ಉಚಿತವಾಗಿದ್ದು, ಯಾವುದೇ ಸಭಾ ಕಾರ್ಯಕ್ರಮವಿಲ್ಲದೆ ನಾಟಕ ನಿಗದಿತ ವೇಳೆಗೆ ಆರಂಭವಾಗಲಿದೆ ಎಂದು ಡಾ. ಎಂ. ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.