ಮೂಡುಬಿದಿರೆ: ಪರಿಸರದ ವಿವಿಧೆಡೆ ಬಕ್ರೀದ್ ಹಬ್ಬವನ್ನು ಸಡಗರ ಮತ್ತು ಧಾರ್ಮಿಕ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ವಾಲ್ಪಾಡಿಯ ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಜರಗಿತು. ಪ್ರಾರ್ಥನೆಯಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಸೀದಿ ಖತೀಬರಾದ ಹಮೀದ್ ದಾರಿಮಿ ಈದ್ ಸಂದೇಶ ನೀಡಿದರು. ಹಬ್ಬವು ಸೌಹಾರ್ದತೆ ಮತ್ತು ತ್ಯಾಗದ ಪ್ರತೀಕವಾಗಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಮಸೀದಿ ಕಮಿಟಿ ಅಧ್ಯಕ್ಷ ಶರೀಫ್ ಎಂ.ಎಂ, ಕಾರ್ಯದರ್ಶಿ ಝಕರಿಯಾ ಯೂಸುಫ್ ಹಾಗೂ ಮಸೀದಿ ಕಮಿಟಿಯ ಪದಾಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.