ಮೂಡುಬಿದಿರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಸಂದರ್ಭವನ್ನು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂಭ್ರಮಾಚರಣೆ ನಡೆಸಿತು.

ಮೂಡುಬಿದಿರೆ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಮಾಜಿ ಪುರಸಭಾ ಸದಸ್ಯರಾದ ಸುರೇಶ್ ಪ್ರಭು, ಸುರೇಶ್ ಕೋಟ್ಯಾನ್, ಜೊಸ್ಸಿ ಮಿನೇಜಸ್, ಇಕ್ಬಾಲ್ ಕರೀಂ, ಅಕ್ರಮ ಸಕ್ರಮ ಸಮಿತಿಯ ಸದಸ್ಯ ವಾಸುದೇವ ನಾಯಕ್ ಹಾಗೂ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಮುಖರಾದ ಪ್ರೇಮನಾಥ್ ಮಾರ್ಲ ಸೇರಿದಂತೆ ಪಕ್ಷದ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಪರಸ್ಪರ ಶುಭ ಹಾರೈಸಿದರು.