ಮೂಡುಬಿದಿರೆ: ಬೆಳುವಾಯಿ ಮೈನ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು. ಶಾಲೆಗೆ ಹೊಸದಾಗಿ ದಾಖಲಾತಿ ಪಡೆದ ವಿದ್ಯಾರ್ಥಿಗಳನ್ನು ಆರತಿ ಬೆಳಗಿ, ಸಿಹಿ ನೀಡಿ ಸ್ವಾಗತಿಸಲಾಯಿತು. ಸರ್ಕಾರದಿಂದ ನೀಡಲಾದ ಉಚಿತ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಕೆಸರ ಗದ್ದೆಯ ಸುನಂದಾ ಮಾಧವ ಪ್ರಭು ಟ್ರಸ್ಟ್ ವತಿಯಿಂದ ವಿಶ್ವನಾಥ ಮಾಧವ ಪ್ರಭು ಬರೆಯುವ ನೋಟ್ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಿತೇಶ್ ಶೆಟ್ಟಿ, ವಿಜೇತ್ ವಿ ಪ್ರಭು, ನಿವೃತ್ತ ಮುಖ್ಯ ಶಿಕ್ಷಕ ದೇವದಾಸ ಕಿಣಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಜಯ ಕೋಟ್ಯಾನ್, ಮಾಜಿ ಅಧ್ಯಕ್ಷ ನಾರಾಯಣ ಪೂಜಾರಿ, ಮಾಜಿ ಸದಸ್ಯ ರಾಘು ಪೆಲಕುಂಜ ಮತ್ತು ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಪ್ರವೀಣ್ ಭಂಡಾರಿ ಉಪಸ್ಥಿತರಿದ್ದರು. ಪ್ರಭಾರ ಮುಖ್ಯ ಶಿಕ್ಷಕಿ ಸುವರ್ಣಿ ಸ್ವಾಗತಿಸಿದರು. ಶಿಕ್ಷಕಿ ಸೀಮಾ ನಾಯಕ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಅರುಣಾ ಶೆಟ್ಟಿ ವಂದಿಸಿದರು.
ಬೆಳುವಾಯಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ
ಬೆಳುವಾಯಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ