ಮೂಡುಬಿದಿರೆ: ನೆಲ್ಲಿಕಾರು ಗ್ರಾಮ ಪಂಚಾಯತ್‌ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಭಾ ಕಾರ್ಯಕ್ರಮ ಹಾಗೂ ಪಂಚಾಯತ್ ಆವರಣದಲ್ಲಿ ಗಿಡ ನೆಡುವುದರ ಮೂಲಕ ಆಚರಿಸಲಾಯಿತು. ಉಪವಲಯ ಅರಣ್ಯಾಧಿಕಾರಿ ಬಸಪ್ಪ ಪರಿಸರ ದಿನಾಚರಣೆಯ ಹಾಗೂ ಸ್ವಚ್ಛತೆಯ ಬಗ್ಗೆ ಮಾಹಿತಿ ನೀಡಿದರು. ಪ್ರತಿಯೊಬ್ಬರೂ ಪರಿಸರದಲ್ಲಿ ಗಿಡಮರಗಳನ್ನು ನೆಟ್ಟು ಬೆಳೆಸಿ, ಮುಂದಿನ ಪೀಳಿಗೆಗೆ ಪ್ರಕೃತಿಯನ್ನು ಕಾಪಾಡುವ ಕೆಲಸ ಮಾಡಬೇಕಾಗಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ದಾಮೋದರ, ಅರಣ್ಯ ಪಾಲಕ ಧರ್ಮರಾಜ್, ಗ್ರಾಮ ಪಂಚಾಯತ್ ಸಿಬ್ಬಂದಿ, ಭ್ರಾಮರಿ ಸಂಜೀವಿನಿ ಒಕ್ಕೂಟದ ಲತಾ, ಯಶಸ್ವಿನಿ, ವಿಜಯ, ರಾಜಶ್ರೀ ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಕುಮಾರ್ ಜೈನ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.