ಮೂಡುಬಿದಿರೆ: ಶೇಡಿಗುರಿ ಹೊಸಬೆಟ್ಟು ಚೈತನ್ಯ ಯುವಕ ಮಂಡಲದ ವತಿಯಿಂದ ಮೂಡುಬಿದಿರೆ ತಾಲೂಕಿನ ಮಾಸ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಲಾ ಮಕ್ಕಳ ಶೈಕ್ಷಣಿಕ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಯುವಕ ಮಂಡಲದ ಸದಸ್ಯರು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.

ಮುಖ್ಯ ಶಿಕ್ಷಕಿ ಸೇಸಮ್ಮ ಹಾಗೂ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಅಶೋಕ ಆಚಾರ್ಯ ಉಪಸ್ಥಿತರಿದ್ದರು.

ಚೈತನ್ಯ ಯುವಕ ಮಂಡಲದ ಉಪಾಧ್ಯಕ್ಷ ಜಯಕರ ಆಚಾರ್ಯ, ಕೋಶಾಧಿಕಾರಿ ವೆಂಕಟೇಶ ಆಚಾರ್ಯ, ಮಾಜಿ ಅಧ್ಯಕ್ಷರಾದ ಸುಧಾಕರ ಆಚಾರ್ಯ, ಕೃಷ್ಣ ಪೂಜಾರಿ, ಶಿಕ್ಷಕರು, ಪೋಷಕರು, ಚೈತನ್ಯ ಯುವಕ ಮಂಡಲ ಸದಸ್ಯರು ಉಪಸ್ಥಿತರಿದ್ದರು.