ಮೂಡುಬಿದಿರೆ: ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಹೊಸಬೆಟ್ಟುವಿನ ಚಂದ್ರಹಾಸ್ ಸನಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಯಲ್ಲಿ ಸದಸ್ಯರ ಸಮ್ಮತಿಯೊಂದಿಗೆ ಚಂದ್ರಹಾಸ್ ಸನಿಲ್ ಅವರನ್ನು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಕಂಬಳ ಕ್ರೀಡೆ ಹಾಗೂ ಸಂಪ್ರದಾಯದ ಉಳಿವು, ಸಂಘಟನೆ ಬಲವರ್ಧನೆ ಮತ್ತು ಮುಂದಿನ ಚಟುವಟಿಕೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು. ನೂತನ ಅಧ್ಯಕ್ಷರ ಆಯ್ಕೆಗೆ ಸದಸ್ಯರು ಅಭಿನಂದನೆ ಸಲ್ಲಿಸಿದರು.