ಮೂಡುಬಿದಿರೆ: ಮೂಲ್ಕಿ-ಮೂಡುಬಿದಿರೆ ಮಂಡಲದ ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯನ್ನು ವಿದ್ಯಾಗಿರಿಯಲ್ಲಿರುವ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು. ಪಕ್ಷದ ಮುಖಂಡ, ಹಿರಿಯ ವಕೀಲ ಎಂ. ಬಾಹುಬಲಿ ಪ್ರಸಾದ್ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿ ಕಾರ್ಯನಿರ್ವಹಿಸಲು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಅಪಾರ. ಸಂವಿಧಾನದಲ್ಲಿ ಜನರ ಹಕ್ಕು ಮತ್ತು ಕರ್ತವ್ಯಗಳನ್ನು ಸವಿಸ್ತಾರವಾಗಿ ನಮೂದಿಸಿರುವುದರಿಂದ, ದೇಶದಲ್ಲಿ ಶಾಂತಿಯುತವಾಗಿ ಕಾರ್ಯ ನಿರ್ವಹಣೆಗೆ ಭದ್ರ ಬುನಾದಿ ಸಿಕ್ಕಿದೆ ಎಂದರು. ಬಿಜೆಪಿ ಹಿರಿಯ ನಾಯಕ ಕೆ.ಆರ್. ಪಂಡಿತ್ ಅವರು ಅಂಬೇಡ್ಕರ್ ಜೀವನ ಚರಿತ್ರೆ ಮತ್ತು ಸಾಧನೆಗಳನ್ನು ಸ್ಮರಿಸಿದರು. ರಾಮಚಂದ್ರ ಬೈಕಂಪಾಡಿ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಮೂಡುಬಿದಿರೆ ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷö್ಮಣ್ ಪೂಜಾರಿ, ಮುಖಂಡಮೇಘನಾಥ್ ಶೆಟ್ಟಿ, ಮಾಜಿ ಪುರಸಭಾ ಅಧ್ಯಕ್ಷ ನಾಗರಾಜ್ ಪೂಜಾರಿ ಒಂಟಿಕಟ್ಟೆ, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಅಣ್ಣಪ್ಪ, ಪ್ರಮುಖರಾದ ಪ್ರಸಾದ್ ಭಂಡಾರಿ, ದಿನೇಶ್ ಕುಮಾರ್, ವಿಠಲ ದೇವಾಡಿಗ, ಶಕ್ತಿ ಕೇಂದ್ರದ ಪ್ರಮುಖ ಕರುಣಾಕರ್ ಶೆಟ್ಟಿ ಮತ್ತಿತರರಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.