ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಿಧನ್ಯಾ ಅಶೋಕ್ ಸುವರ್ಣ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 96 ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದ ಪಿಸಿಎಂಸಿ ವಿಷಯಗಳಲ್ಲಿ ರಿಧನ್ಯಾ ಅತ್ಯುತ್ತಮ ಸಾಧನೆ ಮಾಡಿದ್ದು, ಒಟ್ಟಾರೆ 600 ಅಂಕಗಳಲ್ಲಿ 575 ಅಂಕಗಳನ್ನು ಪಡೆದು ತೇರ್ಗಡೆಯಾಗಿದ್ದಾರೆ. ಈಕೆ ಮೂಡುಬಿದಿರೆ ಬಿರಾವಿನ ಅಶೋಕ್ ಸುವರ್ಣ- ವಿನುತಾ ಅಶೋಕ್ ದಂಪತಿಯ ಪುತ್ರಿ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
'ಖೇಲ್ ಧವಳಾ’- ಗ್ರಾಮೀಣ ಕ್ರೀಡಾಕೂಟ :ಧವಳಾ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಬೆಳುವಾಯಿಯಲ್ಲಿ ಆಗಸ್ಟ್ 22ರಂದು ‘ಕೆಸರಲ್ಲೊಂದು ದಿನ 2026’
ಮೂಡುಬಿದಿರೆ: ದಿಗಂಬರ ಜೈನ ವಿದ್ಯಾವರ್ಧಕ ಸಂಘ ಆಡಳಿತಕ್ಕೊಳಪಟ್ಟ ಶ್ರೀ ಧವಳಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ‘ಖೇಲ್ ಧವಳಾ’ ಗ್ರಾಮೀಣ ಕ್ರೀಡಾಕೂಟ ‘ಕೆಸರಲ್ಲೊಂದು ದಿನ – 2026’ ಆಗಸ್ಟ್ 22ರಂದು ಬೆಳುವಾಯಿಯಲ್ಲಿ ಆಯೋಜಿಸಲಾಗಿದೆ.
ಮೂಡುಬಿದಿರೆ ಗಾಂಧಿನಗರ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮೂಡುಬಿದಿರೆ: ಗಾಂಧಿನಗರದ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ವಿಜಯ ಶೆಟ್ಟಿ ಅಜಾರುಗುತ್ತು ಕಟೀಲು ಧ್ವಜಾರೋಹಣ ನೆರವೇರಿಸಿದರು.
ಕಲ್ಯಾಣಪುರ ತ್ರಿಶಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ-‘ಕ್ರಿಯೇಟಿವ್ ಸವಿಗಾನ’
ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಸ್ವಾತಂತ್ರ್ಯವು ಹಕ್ಕಿನ ಜತೆಗೆ ಜವಾಬ್ದಾರಿಯೂ ಆಗಿದ್ದು, ಹಿರಿಯರ ತ್ಯಾಗ ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಗಣನಾಥ್ ಶೆಟ್ಟಿ ಕರೆ ನೀಡಿದರು.