ಮೂಡುಬಿದಿರೆ : ಇಲ್ಲಿನ ಕೊಡಂಗಲ್ಲು ಉಚ್ಚಂಗಿ ಮಾರಿಯಮ್ಮ ದೇವಸ್ಥಾನದಲ್ಲಿ ವರ್ಷಾವಧಿ ಮಾರಿಪೂಜಾ ಉತ್ಸವವು ಮಂಗಳವಾರ ಮತ್ತು ಬುಧವಾರ ನಡೆಯಿತು. ಮಂಗಳವಾರ ಜ್ಯೋತಿನಗರದಲ್ಲಿರುವ ಉಚ್ಚಂಗಿ ಕಟ್ಟೆಯಲ್ಲಿ ಬೊಂಬೆಯನ್ನು ಪ್ರತಿಷ್ಠಾಪಿಸಿ ಪೂಜೆ ನಡೆಯಿತು. ರಾತ್ರಿ ಸಕಲ ಬಿರುದಾವಳಿಗಳೊಂದಿಗೆ ಮೆರವಣಿಗೆಯ ಮೂಲಕ ಬೊಂಬೆಯನ್ನು ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ವಿಶೇಷ ಪೂಜೆ, ದರ್ಶನ ಹಾಗೂ ಪಂಜುರ್ಲಿ ಕಲ್ಲುಡ-ಕಲ್ಲುರ್ಟಿ ದೈವಗಳ ಕೋಲ ನಡೆಯಿತು. ಬುಧವಾರ ಸಂಜೆ ಬೊಂಬೆಯನ್ನು ಸ್ಥಳೀಯ ಕಾಡಿನಲ್ಲಿ ವಿಸರ್ಜಿಸಲಾಯಿತು. ಇದೇ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವದ ಉಳಿಕೆ ಹಣದಿಂದ ನಿರ್ಮಿಸಿದ ವೇದಿಕೆಯನ್ನು ಕ್ಷೇತ್ರದ ಅಸ್ರಣ್ಣರಾದ ಅನಂತಪದ್ಮನಾಭ ಅಸ್ರಣ್ಣ ಉದ್ಘಾಟಿಸಿದರು. ಬ್ರಹ್ಮಕಲಶೋತ್ಸವವನ್ನು ಯಶಸ್ವಿಯಾಗಿ ನೆರವೇರಿಸಿದ ಆಡಳಿತ ಮಂಡಳಿ ಅಧ್ಯಕ್ಷ ದೇಜು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಸುರೇಶ್ ಕೋಟ್ಯಾನ್ ಹಾಗೂ ಪದಾಧಿಕಾರಿಗಳನ್ನು ಗೌರವಿಸಲಾಯಿತು. ಉತ್ಸವದ ಅಂಗವಾಗಿ ಬೆನಕ ಆರ್ಟ್ಸ್ ತಂಡದಿಂದ ಪೊಲಿಪುದಪ್ಪೆ ಜಲದುರ್ಗಾ ನಾಟಕ ನಡೆಯಿತು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.