ಮೂಡುಬಿದಿರೆ: ಇಂದಿನ ದಿನಗಳಲ್ಲಿ ನಮ್ಮ ಸುತ್ತಲಿನ ಪರಿಸರದಲ್ಲೇ ಅಪಾರ ಮಾಹಿತಿಯಿದ್ದು, ಅದನ್ನು ಅರಿಯಲು ಸದಾ ಮೊಬೈಲ್ ಅಥವಾ ಇಂಟರ್ನೆಟ್ ಅವಶ್ಯಕವಿಲ್ಲ, ವಿದ್ಯಾರ್ಥಿಗಳು ತಮ್ಮ ಸುತ್ತಲಿನ ವಸ್ತುಗಳನ್ನು ಗಮನಿಸುವ ಮೂಲಕವೇ ಬಹಳಷ್ಟು ಕಲಿಯಬಹುದು ಎಂದು ಮಾಹೆಯ ಸೌರ ಭೌತಶಾಸ್ತ್ರ ಸಂಶೋಧಕ ಅತುಲ್ ಭಟ್ ಹೇಳಿದರು. ಆಳ್ವಾಸ್ ಶಾಲೆ ಆಯೋಜಿಸಿದ್ದ ‘ಖಗೋಳಶಾಸ್ತ್ರ ಬೇಸಿಗೆ ಶಿಬಿರ 2026’ ಉದ್ಘಾಟಿಸಿ ಅವರು ಮಾತನಾಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಚಿಕ್ಕ ವಯಸ್ಸಿನಿಂದಲೇ ಆಕಾಶವನ್ನು ಅನ್ವೇಷಿಸುವುದು ಒಳ್ಳೆಯ ಹವ್ಯಾಸ. ಆಕಾಶ ಮತ್ತು ಸಮುದ್ರದಲ್ಲಿ ಅನ್ವೇಷಿಸಲು ಇನ್ನೂ ಅನೇಕ ವಿಷಯಗಳಿದ್ದು, ಲಭ್ಯವಿರುವ ಅಪಾರ ಅವಕಾಶಗಳನ್ನು ಬಳಸಿಕೊಳ್ಳುವುದು ನಮ್ಮ ಕೈಯಲ್ಲಿದೆ ಎಂದರು. ಕಾರ್ಯಕ್ರಮದಲ್ಲಿ ಗೌರವ ಅತಿಥಿ ನಾಸಾ ವಿಜ್ಞಾನಿ ಪ್ರಕೃತಿ ಪ್ರಕಾಶ್, ಶಾಲಾ ಪ್ರಾಂಶುಪಾಲರು ಶೈಲಜಾ ಬೋಳ ಹೆಗ್ಡೆ, ಶಾಲಾ ಆಡಳಿತ ಅಧಿಕಾರಿ ನಿತೇಶ್ ಮಾರ್ನಾಡ್, ಸಹಾಯಕ ಆಡಳಿತ ಅಧಿಕಾರಿ ರಾಜೇಶ್, ಕಾರ್ಯಕ್ರಮ ಸಂಯೋಜಕರು ಸೌಮ್ಯ ಆದಿತ್ಯ ಮತ್ತು ಅಶ್ವಿನಿ ಪ್ರಭು ಉಪಸ್ಥಿತರಿದ್ದರು. ನಿಶಾ ರೋಡ್ರಿಗಸ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಆಳ್ವಾಸ್ ಖಗೋಳಶಾಸ್ತ್ರ ಬೇಸಿಗೆ ಶಿಬಿರ ಉದ್ಘಾಟನೆ
Alvas summer camp held at school