ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಯೂರಿನಲ್ಲಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೂಡುಬಿದಿರೆ : ಮಂಗಳೂರು ವಕೀಲ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಜಗದೀಶ್ ಶೇಣವ ಹಾಗೂ ಮೂಡುಬಿದಿರೆ ವಕೀಲ ಸಂಘದ ನೂತನ ಅಧ್ಯಕ್ಷ ಶರತ್ ಶೆಟ್ಟಿ ಅವರನ್ನು ಶನಿವಾರ ವಿದ್ಯಾಗಿರಿಯ ಕುವೆಂಪು ಸಭಾಂಗಣದಲ್ಲಿ ಸನ್ಮಾನಿಸಲಾಯಿತು.
ಮೂಡುಬಿದಿರೆ: ಸಹಕಾರ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಆರೋಗ್ಯ ವಿಮಾ ಕ್ಷೇತ್ರದಲ್ಲಿನ ಅತ್ಯುತ್ತಮ ಕಾರ್ಯಕ್ಕಾಗಿ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ಲಭಿಸಿದೆ.
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದ್ದ ಅನುಮಾನಗಳಿಗೆ ತೆಂಕಮಿಜಾರಿನಲ್ಲಿ ಮತ್ತೊಂದು ಸ್ಪಷ್ಟ ಉದಾಹರಣೆ ದೊರೆತಿದೆ.
ಮೂಡುಬಿದಿರೆ: ಮೆಸ್ಕಾಂ ವ್ಯಾಪ್ತಿಯ ವಿದ್ಯುತ್ ವಿತರಣೆ ಜವಾಬ್ದಾರಿಯನ್ನು ಟಾಟಾ ಪವರ್ ಕಂಪನಿ ಲಿಮಿಟೆಡ್ಗೆ ವಹಿಸುವುದನ್ನು ವಿರೋಧಿಸಿ, ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ (ಕೆಇಆರ್ಸಿ) ಜೂನ್ 23ರ ಒಳಗಾಗಿ ಆಕ್ಷೇಪಣೆ ಸಲ್ಲಿಸಲು ಮೂಡುಬಿದಿರೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ.
ಮೂಡುಬಿದಿರೆ: ತುಳು ಭಾಷಿಕರ ಮನಸ್ಸು ಗೆದ್ದಿದ್ದ, ಮೂಡುಬಿದಿರೆ ತಾಲೂಕಿನ ಮಾರ್ನಾಡು ನಿವಾಸಿ ಕಮಲ ದೊಡ್ಡ(ಅಜ್ಜಿ) ಶನಿವಾರ ನಿಧನರಾಗಿದ್ದಾರೆ. ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಮೂಡುಬಿದಿರೆ: ಶಿಕ್ಷಣ, ಸಂಸ್ಕೃತಿ ಹಾಗೂ ಸಮಾಜ ಸೇವೆಯ ಕ್ಷೇತ್ರಗಳಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಡಾ. ಎಂ. ಮೋಹನ ಆಳ್ವ ಅವರ 75ನೇ ವರ್ಷದ ಸಂಭ್ರಮಾಚರಣೆಯ ಅಂಗವಾಗಿ ನಡೆಯಲಿರುವ ಅಭಿನಂದನಾ ಸಮಾರಂಭದ ಪ್ರಥಮ ಪೂರ್ವಭಾವಿ ಸಭೆ ಕನ್ನಡ ಭವನದಲ್ಲಿ ನಡೆಯಿತು.
ಶಾಸಕ ಉಮಾನಾಥ ಎ. ಕೋಟ್ಯಾನ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಮೂಡುಬಿದಿರೆಯ ಜನತೆ ಒಗ್ಗೂಡಿ ಡಾ. ಮೋಹನ ಆಳ್ವರಿಗೆ ಅಭಿನಂದನಾ ಸಮಾರಂಭ ಆಯೋಜಿಸುವ ಕುರಿತು ಚರ್ಚಿಸಲಾಯಿತು. ಸಮಾರಂಭದ ಅಂಗವಾಗಿ ಪ್ರತಿ ವರ್ಷ ಡಾ. ಮೋಹನ ಆಳ್ವ ಅವರ ಹೆಸರಿನಲ್ಲಿ ಕನ್ನಡ ಮಾಧ್ಯಮ ಶಾಲೆಗೆ ನೆರವು ನೀಡುವುದು, ಬಡ ಮಕ್ಕಳ ಶಿಕ್ಷಣಕ್ಕೆ ಸಹಾಯಧನ ಒದಗಿಸುವುದು ಹಾಗೂ ಅವರ ಸಾಧನೆಗಳನ್ನು ದಾಖಲಿಸುವ ಗ್ರಂಥವನ್ನು ಪ್ರಕಟಿಸುವ ಯೋಜನೆ ರೂಪಿಸಲಾಗಿದೆ ಎಂದು ಉಮಾನಾಥ ಎ. ಕೋಟ್ಯಾನ್ ತಿಳಿಸಿದರು.